ವಿ. ಸತೀಶ್

Update: 2018-07-02 17:35 GMT

ಹಾಸನ: ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮತ್ತು ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಹಾಗೂ ನ್ಯಾಯಾಂಗ ಇಲಾಖೆಯ ನೌಕರನಾಗಿದ್ದ ವಿ. ಸತೀಶ್ ಹಾಸನದ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.

ಉತ್ತಮ ಕ್ರೀಡಾಪಟುವಾಗಿದ್ದ ಕೋರ್ಟ್ ಸತೀಶ್ ಅವರು ರಂಗಸಿರಿ ಸಂಘಟಕರಾಗಿ, ಕಲಾವಿದರಾಗಿ ಗಮನಸೆಳೆದಿದ್ದರು. ವರ್ಷದಿಂದ ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಮಂಗಳವಾರ ಮದ್ಯಾಹ್ನ ಸಕಲೇಶಪುರ ತಾಲೂಕು ಕ್ಯಾನಹಳ್ಳಿಯಲ್ಲಿ ನರೆವೇರಲಿದೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ