ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನಾಪತ್ತೆ

Update: 2018-07-03 08:31 GMT

ಕುಮಟಾ, ಜು.3: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೊಬ್ಬರು ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಇಲ್ಲಿನ ಕಾಗಲ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಇಲ್ಲಿನ ಮುಲ್ಲಾ ಅಹ್ಮದ್ ಸಾಬ್ ಸಮುದ್ರದಲ್ಲಿ ನಾಪತ್ತೆಯಾದವರು. ಇವರು ಇಂದು ಮುಂಜಾನೆ ಕಾಗಲ ಬಳಿ ಪಾತಿ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿದ ಪಾತಿ ದೋಣಿ ಮಗುಚಿಬಿದ್ದಿದೆ. ಈ ವೇಳೆ ಅಹ್ಮದ್ ಸಾಬ್ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.

ಅವರಿಗಾಗಿ ಶೋಧ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News