×
Ad

ಹನೂರು: ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

Update: 2018-07-04 18:14 IST

ಹನೂರು,ಜು.04: ಕಂದಾಯ ಅದಾಲತ್ ಕಾರ್ಯಕ್ರಮ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಇದು ಜನಸ್ನೇಹಿಯಾಗಿದೆ ಎಂದು ಮಲೈಮಹದೇಶ್ವರಬೆಟ್ಟ ಗ್ರಾಮ ಲೆಕ್ಕಾಧಿಕಾರಿ ವಿನೋದ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಲೈಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ಧ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಸ್ಥಳದಲ್ಲಿ ಅರ್ಜಿಗಳನ್ನು ನೀಡಬಹುದಾಗಿದ್ದು, ಸಾರ್ವಜನಿಕರ ವಿಲೇವಾರಿಯೂ ಪಾರದರ್ಶಕವಾಗಿದ್ದು,  ಸ್ಥಳದಲ್ಲಿಯೇ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಕಂದಾಯ ಇಲಾಖೆ ಕಳೆದ 4 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ರೈತರು ಪಹಣಿ ಪತ್ರದಲ್ಲಿನ ಹೆಸರು, ವಿಸ್ತೀರ್ಣದಲ್ಲಿನ ಲೋಪದೋಷ, ಪೌತಿ ಖಾತೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿನ ಇನ್ನಿತರ ದೋಷಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಮತ್ತು ಪಹಣಿ ಪತ್ರದಲ್ಲಿನ ಲೋಪದೋಷಗಳಿಗೆ ಸಂಬಂಧಿಸಿದಂತೆ ರೈತರು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ದೋಷರಹಿತ ಆರ್‍ಟಿಸಿಯನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಸ್ವ ನೀರಿಕ್ಷಕ ನಂಜುಂಡಸ್ವಾಮಿ, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News