ಬಜೆಟ್ ಮಂಡನೆಗೂ ಮುನ್ನ ಸಿಎಂ ಆದಿಚುಂಚನಗಿರಿ ಮಠಕ್ಕೆ ಭೇಟಿ

Update: 2018-07-05 05:16 GMT

ಬೆಂಗಳೂರು, ಜು.5: ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಮಂಡಿಸಲಿರುವ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗುರುವಾರ ಬೆಳಗ್ಗೆ ಬಜೆಟ್ ಮಂಡನೆಗೂ ಮುನ್ನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.

 ವಿಜಯ ನಗರದಲ್ಲಿರುವ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಸಿಎಂ ಕುಮಾರಸ್ವಾಮಿ ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದರು. ಅಲ್ಲಿಂದ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ  ಮುಖ್ಯಮಂತ್ರಿ ಕುಮಾರಸ್ವಾಮಿ   ಬಜೆಟ್ ಪ್ರತಿಯುಳ್ಳ ಸೂಟ್ ಕೇಸ್ ಜತೆ ವಿಧಾನಸೌಧಕ್ಕೆ ಆಗಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News