ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು: ಯುವಕ ಮೃತ್ಯು, ಪ್ರಿಯತಮೆ ಗಂಭೀರ

Update: 2018-07-06 15:06 GMT

ಮಂಡ್ಯ, ಜು.6: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಿಯಕರ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಚಿಕ್ಕಯಾರಹಳ್ಳಿ ಬಳಿ ನಡೆದಿದೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಯಡಿಹಾಳ ಗ್ರಾಮದ ಶಿವು(19) ಮೃತಪಟ್ಟಿದ್ದು, ಈತನ ಪ್ರೇಯಸಿ ಅನ್ನಪೂರ್ಣ(18) ಸ್ಥಿತಿ ಗಂಭೀರವಾಗಿದೆ.
ಒಂದೇ ಗ್ರಾಮದ ಶಿವು, ಅನ್ನಪೂರ್ಣ ಪರಸ್ಪರ ಪ್ರೀತಿಸುತ್ತಿದ್ದು, ಇವರ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಚಿಕ್ಕಯಾರಹಳ್ಳಿಯ ಆಂಜನೇಯ ದೇವಸ್ಥಾನದ ಬಳಿ ಒದ್ದಾಡುತ್ತಿದ್ದ ಇವರನ್ನು ಗಮನಿಸಿದ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆಸಿದರು. ಆದರೆ, ಆ ವೇಳೆಗೆ ಶಿವ ಮೃತಪಟ್ಟಿದ್ದ ಎನ್ನಲಾಗಿದೆ.

ತೀವ್ರ ಅಸ್ವಸ್ಥಗೊಂಡಿರುವ ಅನ್ನಪೂರ್ಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಎಸ್. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News