ಜು. 7: ಉಡುಪಿಯಲ್ಲಿ ಸಂಗೀತೋತ್ಸವ

Update: 2018-07-06 16:52 GMT

ಉಡುಪಿ, ಜು. 6: ವಿಶ್ವ ಸಂಗೀತ ದಿನಾಚರಣೆಯ ಪ್ರಯುಕ್ತ ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ರೆಡ್ ಎಫ್‌ಎಂ 93.5 ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಸಂಗೀತೋತ್ಸವ’ವನ್ನು ಸಂಜೆ 6 ಗಂಟೆಗೆ ಆಯೋಜಿಸಿದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಉಡುಪಿಯ ಭಾರ್ಗವಿ ಡ್ಯಾನ್ಸ್ ಅಕಾಡೆಮಿಯ ಸಹಯೋಗದಲ್ಲಿ ನಡೆಯುವ ಈ ಸಂಗೀತೋತ್ಸವದಲ್ಲಿ ರಾಜ್ಯದ ಜನಪ್ರಿಯ ಸುಗಮ ಸಂಗೀತ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಎಂ.ಡಿ.ಪಲ್ಲವಿ ಮತ್ತು ಪಂಚ ಭಾಷಾ ಗಾಯಕ ಅಜಯ್ ವಾರಿಯರ್ ಅವರು ಭಕ್ತಿಗೀತೆ, ಭಾವಗೀತೆಗಳನ್ನು ಹಾಡಲಿದ್ದಾರೆ ಎಂದು ರೆಡ್ ಎಫ್‌ಎಂನ ಶೋಭಿತ್ ಶೆಟ್ಟಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಠದ ದಿವಾನರಾದ ಶಿಬರೂರು ವೇದವ್ಯಾಸ ತಂತ್ರಿ, ಭಾರ್ಗವಿಯ ಶ್ರೀಕಾಂತ್ ಉಪಾಧ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News