ಸಾಲಬಾಧೆ: ಕೇಬಲ್ ಆಪರೇಟರ್ ಆತ್ಮಹತ್ಯೆ

Update: 2018-07-06 17:24 GMT

ಮೈಸೂರು,ಜು.6: ಸಾಲಬಾಧೆ ತಾಳಲಾರದೇ ಕೇಬಲ್ ಆಪರೇಟರ್ ಓರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಮೃತರನ್ನು ಮೈಸೂರಿನ ಕೆ.ಆರ್.ಮೊಹಲ್ಲಾದ ನಿವಾಸಿ ಜಿ.ಆರ್.ಬಾಬು ಎಂದು ಗುರುತಿಸಲಾಗಿದ್ದು, ಕೇಬಲ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಲ ಮರುಪಾವತಿಸಲಾಗದೇ ಮನನೊಂದು ನಂಜನಗೂಡಿನ ಲಾಡ್ಜ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News