ಕುಮಟಾ: ಬಸ್-ಲಾರಿ ನಡುವೆ ಅಪಘಾತ; ಇಬ್ಬರು ಮೃತ್ಯು; ಹಲವು ಮಂದಿಗೆ ಗಂಭೀರ ಗಾಯ

Update: 2018-07-07 14:51 GMT

ಕಾರವಾರ, ಜು. 7: ಲಾರಿ ಮತ್ತು ಸಾರಿಗೆ ಬಸ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇದೀಗ ನಡೆದಿದೆ.

ಕುಮಟಾದ ಹೆದ್ದಾರಿಯಲ್ಲಿನ ಪಾಂಡುರಂಗ ಹೋಟೆಲ್‌ನ ಸಮೀಪ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಬ್ಬಿಣದ ಬೃಹತ್ ಕಂಬವೊಂದನ್ನು ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಒಂದು ಭಾಗದಲ್ಲಿ ಕುಳಿತಿದ್ದವರಿಗೆ ಲಾರಿಯಲ್ಲಿದ್ದ ಕಬ್ಬಿಣದ ಕಂಬ ಬಡಿಡು ಗಂಭೀರ ಗಾಯಗೊಂಡರು ಎಂದು ಮಾಹಿತಿ ದೊರಕಿದೆ.

ಪೊಲೀಸರು, ಸ್ಥಳೀಯರ ಸಹಾಯದಿಂದ ಮೃತದೇಹ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News