ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಖಾಸಗಿ ಬಸ್

Update: 2018-07-07 17:50 GMT

ಸಕಲೇಶಪುರ,ಜು.07: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದಿರುವ ಘಟನೆ ನಡೆದಿದೆ.

ತಾಲೂಕಿನ ಗುಲಗಳಲೆ ಸಮೀಪ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಟ್ರಾವೆಲ್ಸ್ ನ ಬಸ್ಸೊಂದು ಚಾಲಕನ ಹತೋಟಿ ತಪ್ಪಿ ಹೆದ್ದಾರಿ ಪಕ್ಕದ ಗುಂಡಿಗೆ ಬಿದ್ದಿದ್ದು, ಅದೃಷ್ಟವಷಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಬಸ್ ನಲ್ಲಿದ್ದ 5 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಸಕಲೇಶಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News