×
Ad

ಹಿರಿಯಡ್ಕ: ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕಾರ್ಯಗಾರ

Update: 2018-07-08 17:28 IST

ಉಡುಪಿ, ಜು. 8: ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಮಾಹಿತಿ ಘಟಕ, ಐಕ್ಯುಎಸಿ ಘಟಕ ಹಾಗೂ ಬ್ರಹ್ಮಾವರ ನರೆನ್ ಅಕಾಡೆಮಿಯ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸಿವಿಲ್ ಸರ್ವಿಸಸ್ ಪರೀಕ್ಷೆಯ ಒಂದು ದಿನದ ಪೂರ್ವ ತಯಾರಿ ಕಾರ್ಯಗಾರವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ನರೆನ್ ಅಕಾಡೆಮಿಯ ಚಂದ್ರಕಾಂತ್ ವಿ. ಹಾಗೂ ವಿವೇಕ್ ಕಾಮತ್ ಐಎಎಸ್, ಕೆಎಎಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮುಖ್ಯ ಅತಿಥಿಯಾಗಿ ದೊಡ್ಡಣಗುಡ್ಡೆ ಎ.ವಿ.ಬಾಳಿಗ ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ವಿದ್ಯಾಥಿಗರ್ಳಿಗೆ ಆರೋಗ್ಯ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ದಿನೇಶ್ ಎಂ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯುಎಸಿ ಸಂಚಾಲಕಿ ಸುಮನ ಬಿ. ವಂದಿಸಿದರು. ವಿದ್ಯಾರ್ಥಿ ಸಂಚಾಲಕ ಅನುಷಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಚಾಲಕ ದೀಪಕ್ ಮತ್ತು ಸುಧೀರ್ ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News