ಪ್ರಧಾನಿ ಮೋದಿಗೆ ಧಮ್ ಇದ್ದರೆ ರಾಮ ಮಂದಿರಕ್ಕೆ ಅಡಿಪಾಯ ಹಾಕಲಿ: ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ
Update: 2018-07-08 14:18 GMT
ವಿಜಯಪುರ, ಜು.8: ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರಿಗೆ ಧಮ್ ಇದ್ದರೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಅಡಿಪಾಯ ಹಾಕಿ ಲೋಕಸಭಾ ಚುನಾವಣಾ ಪ್ರಚಾರಕ್ಕಿಳಿಯಲಿ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಸವಾಲು ಹಾಕಿದ್ದಾರೆ.
ರವಿವಾರ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಬಾಬರೀ ಮಸೀದಿ ಧ್ವಂಸದ ವೇಳೆ ಅಮಾಯಕ ಯುವಕರನ್ನು ಬಲಿ ನೀಡಿದರು. ಆದರೂ, ರಾಮಮಂದಿರದ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿಯವರು ಮೋದಿ ಹೆಸರಿನಲ್ಲಿ ಕತ್ತೆ ನಿಲ್ಲಿಸಿದರೂ ಗೆಲ್ಲುತ್ತದೆ ಎಂದು ಭಾವಿಸಿದ್ದಾರೆ. ಆದರೆ, ಟಿಕೆಟ್ಗಳನ್ನು ಮಾರಿಕೊಂಡಿದ್ದಾರೆಂದು ಆಕ್ರೋಶ ಹೊರಹಾಕಿದ ಅವರು, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಸಿಕ್ಕರೆ ಸ್ಪರ್ಧಿಸಲು ತಾನು ಸಿದ್ಧ. ಈ ಬಾರಿ ಬಿಜೆಪಿ ಸಂಸದನನ್ನು ನಾವು ಸೋಲಿಸುತ್ತೇವೆ ಎಂದು ಭವಿಷ್ಯ ನುಡಿದರು.