ಎಸಿಬಿ ದಾಳಿ: ದಾಖಲೆ ವಶ

Update: 2018-07-09 16:07 GMT

ಬೆಂಗಳೂರು, ಜು.9: ಬಳ್ಳಾರಿಯ ಜಯನಗರ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯ ಎಎಓ ದುರ್ಗಪ್ಪ ಮನೆ ಹಾಗೂ ಕಚೇರಿಯ ಎಸಿಬಿ ದಾಳಿ ನಡೆಸಿ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿ ಆಧರಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಹಿನ್ನೆಲೆಯಲ್ಲಿ ದುರ್ಗಪ್ಪ ಅವರ ಬ್ರಹ್ಮಯ್ಯ ಕಾಲನಿ, ವಿಶ್ವೇಶರನಗರದ ವಾಸದ ಮನೆ, ಎಂ.ವಿ.ನಗರ, ಕಾಪಗಲ್ ರಸ್ತೆ, ಬಳ್ಳಾರಿಯಲ್ಲಿರುವ ತಂಗಿಯ ಮನೆ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಯಿತು.

ಬಳ್ಳಾರಿ ಎಸಿಬಿ ಪೊಲೀಸ್ ಠಾಣೆಯ ತಂಡಗಳಿಂದ ಮೇಲ್ಕಂಡ ಆರೋಪಿತ ಸರಕಾರಿ ನೌಕರರ ವಿರುದ್ದ ದಾಳಿ ಮುಂದುವರೆದಿದ್ದು, ಸದರಿ ಸರಕಾರಿ ನೌಕರರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News