ಹನೂರು: ಮಲೈಮಹದೇಶ್ವರಸ್ವಾಮಿ ಅಭಿವೃದ್ದಿ ಪ್ರಾಧಿಕಾರ ವತಿಯಿಂದ ಬೀಳ್ಕೊಡುಗೆ
Update: 2018-07-10 17:09 GMT
ಹನೂರು,ಜು.10: ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಬಿ.ಮಾಧುವರಾಜು ಸೇವೆಯಿಂದ ನಿವೃತ್ತಿ ಹೊಂದಿದ್ದು, ಪ್ರಾಧಿಕಾರದ ವತಿಯಿಂದ ಗೌರವ ಪೂರ್ವಕವಾಗಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ನಂತರ ಮಾತನಾಡಿದ ಪ್ರಾಧಿಕಾರದ ಉಪಕಾರ್ಯದರ್ಶಿ ರಾಜಶೇಖರ್ ಮೂರ್ತಿ, ಶ್ರೀ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಮಾಧುರಾಜ್ ಸುಮಾರು 40 ವರ್ಷಗಳಿಂದ ಮಲೈಮಹದೇಶ್ವರ ಸನ್ನಿಧಿಯಲ್ಲಿ ಎಲ್ಲಾ ವಿಭಾಗಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸುಮಾರು 6 ವರ್ಷಗಳ ಕಾಲ ಅಧೀಕ್ಷಕರಾಗಿ ಸಹ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಧೀಕ್ಷಕರಾದ ಬಸವರಾಜು, ಗುತ್ತಿಗೆ ನಿರ್ವಾಹಕ ಜನಾರ್ದನ್ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಆರ್ಚಕರು ಹಾಜರಿದ್ದರು.