ರಾಮನಗರ: ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಮೃತ್ಯು

Update: 2018-07-11 09:32 GMT

ರಾಮನಗರ, ಜು.11 : ಕಾರ್ಖಾನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. 

ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲೊಕೇಶ್, ಮಹೇಶ್, ಸರವಣ ಎಂಬವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News