ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ: ಯೋಧ ಹುತಾತ್ಮ
Update: 2018-07-11 15:36 GMT
ಶ್ರೀನಗರ, ಜು.11: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಕಮಾಂಡೊ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕುಪ್ವಾರದ ಸಾದು ಗಂಗಾ ಅರಣ್ಯಪ್ರದೇಶದಲ್ಲಿ ಭಯೋತ್ಪಾದಕರ ತಂಡವೊಂದು ಅವಿತುಕೊಂಡಿರುವ ಬಗ್ಗೆ ದೊರೆತ ಮಾಹಿತಿಯನ್ವಯ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ 3 ಪ್ಯಾರ ರೆಜಿಮೆಂಟ್ನ ಸಿಪಾಯ್ ಮುಕುಲ್ ಮೀನಾ ಮೃತಪಟ್ಟಿದ್ದು, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.