ಸ್ಕೂಟರ್‌ಗೆ ಕಾರು ಢಿಕ್ಕಿ; ಗಾಯಾಳು ಸವಾರ ಸಾವು

Update: 2018-07-11 15:44 GMT

ಮಂಗಳೂರು, ಜು.11: ಸಮೀಪದ ಪಣಂಬೂರು ಪೆಟ್ರೋಲ್ ಬಂಕ್ ಬಳಿ ಸ್ಕೂಟರ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಪಿ.ಆರ್.ಪಿ.ಎನ್. ಕೋನೆಟಿ ರಾವ್ ಎಂದು ಗುರುತಿಸಲಾಗಿದೆ.

ಜು.9ರಂದು ರಾ.ಹೆ.66ರಲ್ಲಿ ಸುರತ್ಕಲ್‌ನಿಂದ ಕೊಟ್ಟಾರಚೌಕಿ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಕೋನೆಟಿ ರಾವ್, ಪಣಂಬೂರು ಪೆಟ್ರೋಲ್ ಬಂಕ್ ಸಮೀಪಿಸುತ್ತಿದ್ದ ವೇಳೆ ಘಟನೆ ನಡೆದಿದೆ.

ಅದೇ ಮಾರ್ಗದಲ್ಲಿ ನಿರ್ಲಕ್ಷತನದಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಪವನ್ ಸ್ಕೂಟರ್‌ಗೆ ಢಿಕ್ಕಿ ಹೊಡೆಸಿದ್ದಾರೆ. ಪರಿಣಾಮ ಸವಾರ ಸ್ಕೂಟರ್ ಸಮೇತ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಬಳಿಕ ಗಾಯಾಳುವನ್ನು ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟಿದ್ದಾನೆ.
ಈ ಕುರಿತು ನಗರ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News