×
Ad

ಕಲ್ಲಡ್ಕ: ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆ

Update: 2018-07-12 14:41 IST

ಬಂಟ್ವಾಳ, ಜು.12: ತಾಲೂಕಿನ ಕಲ್ಲಡ್ಕ ಸಮೀಪದ ಹನುಮಾನ್ ನಗರದ ನಿವಾಸಿ ಉಮಾನಾಥ ಪ್ರಭು (47) ಎಂಬವರು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಜೂ.15ರಂದು ಅಪರಾಹ್ನ 3 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಹೋದವರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಅಲ್ಲದೆ, ಜೂ.17ರಂದು ಫೋನ್ ಮಾಡಿ ಮನೆಗೆ ಬರುವುದಾಗಿ ತಿಳಿಸಿದ್ದು, ಇದುವರೆಗೂ ಹಿಂದಿರುಗಿರುವುದಿಲ್ಲ. ಅಲ್ಲದೆ, ಇದೀಗ ಅವರ ಮೊಬೈಲ್ ಫೋನ್ ಸ್ವಿಚ್‌ಆಫ್ ಆಗಿದೆ ಎಂದು ಉಮಾನಾಥ ಪ್ರಭು ಅವರ ಪತ್ನಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ವ್ಯಕ್ತಿಯನ್ನು ಕಂಡು ಬಂದಲ್ಲಿ ದೂರವಾಣಿ ಸಂಖ್ಯೆ: 08255-232111, 235000ಗೆ ಮಾಹಿತಿ ನೀಡುವಂತೆ ಬಂಟ್ವಾಳ ಪೊಲೀಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News