ಸ್ಕೂಟರ್‌ಗೆ ಬೈಕ್ ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ

Update: 2018-07-12 17:16 GMT

ಮಂಗಳೂರು, ಜು.12: ತಾಲೂಕಿನ ಬಡಗುಳಿಪಾಡಿ ಗ್ರಾಮದ, ಸುರಲ್ಪಾಡಿಯ ರಾಜ್ ಅಕಾಡಮಿ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ಗಂಜಿಮಠದ ಝರಾಲ್ಡ್ ಪಿಂಟೋ ಎಂದು ಗುರುತಿಸಲಾಗಿದೆ.

ಝರಾಲ್ಡ್ ಪಿಂಟೋ ಜು.10ರಂದು ರಾತ್ರಿ ಬಜಪೆಯ ಕೋಳಿ ಅಂಗಡಿಯಲ್ಲಿ ಕೆಲಸ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದು, ಸುರಲ್ಪಾಡಿ ರಾಜ್ ಅಕಾಡಮಿ ಬಳಿ ತಲುಪುತ್ತಿದ್ದ ವೇಳೆ ಘಟನೆ ನಡೆದಿದೆ.

ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿಕೊಂಡು ಬಂದ ಸವಾರ ಸ್ಕೂಟರ್‌ಗೆ ಢಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆಸೆಯಲ್ಪಟ್ಟ ಸವಾರ ಝರಾಲ್ಡ್ ಪಿಂಟೋಗೆ ಗಾಯಗಳಾಗಿವೆ.

ಘಟನೆಯ ಬಳಿಕ ಅಫಘಾತ ಪಡಿಸಿದ ಬೈಕ್ ಸವಾರ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News