ಅಪಘಾತ: ಪಾದಚಾರಿಗೆ ಗಾಯ

Update: 2018-07-12 16:14 GMT

ಮಂಗಳೂರು, ಜು.12: ಬಿಜೈ ನ್ಯೂರೋಡ್ ಸಂಕೇಯ್ ಶೀಲ್ಸ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಗಾಯಾಳುವನ್ನು ಕಂದಕ್ ಶಕ್ತಿನಗರ ನಿವಾಸಿ ದಯಾನಂದ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಲ್ಯಾಂಡ್‌ಮಾರ್ಕ್ ಅಪಾರ್ಟ್‌ಮೆಂಟ್ ಕಡೆಯಿಂದ ಆನೆಗುಂಡಿ ಕಡೆಗೆ ನಿರ್ಲಕ್ಷತನ ಹಾಗೂ ದುಡುಕುತನದಿಂದ ಸ್ಕೂಟರ್‌ನ್ನು ಚಲಾಯಿಸಿಕೊಂಡು ಬಂದ ಸವಾರ ದಯಾನಂದ ಅವರಿಗೆ ಢಿಕ್ಕಿ ಹೊಡೆಸಿದ್ದಾರೆ. ಪರಿಣಾಮ ರಸ್ತೆ ದಾಟುತ್ತಿದ್ದ ದಯಾನಂದ ಗಾಯಗೊಂಡಿದ್ದಾರೆ. ಬಳಿಕ ಗಾಯಾಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News