ನಂಜನಗೂಡು: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ

Update: 2018-07-12 17:37 GMT

ಮೈಸೂರು,ಜು.12: ತನ್ನ ಕರ್ತವ್ಯ ನಿಯಂತ್ರಣದಲ್ಲಿ ತೊಡಗಿದ್ದ ಟ್ರಾಫಿಕ್ ಪೊಲೀಸ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿ, ಬೆದರಿಕೆ ಹಾಕಿ ಪರಾರಿಯಾದ ಘಟನೆ ನಂಜನಗೂಡಿನ ಅಪೋಲೋ ವೃತ್ತದಲ್ಲಿ ನಡೆದಿದೆ.

ಟ್ರಾಫಿಕ್ ನಿಯಂತ್ರಣದಲ್ಲಿ ತೊಡಗಿದ್ದ ಪೇದೆ ಕೀರ್ತನ ಎಂ.ಎನ್ ಹಲ್ಲೆಗೊಳಗಾದವರು. ನಂಜನಗೂಡು ನಗರದ ಮೈಸೂರು ರಸ್ತೆಯ ಅಪೋಲೋ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಜನರನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುತ್ತಿದ್ದ ವೇಳೆ ಪಲ್ಸರ್ ಬೈಕ್‍ನಲ್ಲಿ ಬಂದ ವ್ಯಕ್ತಿಯೊಬ್ಬ ಮಧ್ಯ ನುಗ್ಗಲು ಯತ್ನಿಸಿದ್ದಾನೆ. ಈತನನ್ನು ಹಿಡಿಯಲು ಹೋದ ಪೇದೆಗೆ ಕಪಾಲಕ್ಕೆ ಹೊಡೆದುದಲ್ಲದೆ ಆತನಿಗೆ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ತಕ್ಷಣ ಅಲ್ಲಿದ್ದ ಸಾರ್ವಜನಿಕರು ಮತ್ತು ಪೇದೆ ಆತನನ್ನು ಹಿಡಿಯಲು ಯತ್ನಿಸಿದರಾದರೂ ಆತ ಧರಿಸಿದ್ದ ಟೀ ಶರ್ಟ್ ಅನ್ನು ತೆಗೆದು ಅಲ್ಲಿಂದ ಪರಾರಿಯಾಗಿದ್ದಾನೆ. ಹಿಂಬದಿ ಕುಳಿತಿದ್ದ ಆತನ ಸ್ನೇಹಿತ ಮತ್ತು ಬೈಕ್‍ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News