ಮುಂಡಗೋಡ: ವಿಷ ಸೇವಿಸಿ ರೈತ ಆತ್ಮಹತ್ಯೆ

Update: 2018-07-13 17:22 GMT

ಮುಂಡಗೋಡ,ಜು.13: ಸಾಲಭಾದೆ ತಾಳಲಾರದೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಕೋಡಂಬಿ ಗ್ರಾ.ಪಂ ವ್ಯಾಪ್ತಿಯ ಅಶೋಕ ಭಜಂತ್ರಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.

ತನ್ನ ತಂದೆಯ ಹೆಸರಿನಲ್ಲಿದ್ದ ಹೊಲದ ಮೇಲೆ 1ಲಕ್ಷ ರೂ ಸಾಲ, ಎಲ್.ಎನ್.ಟಿ. ಕಂಪನಿಯಲ್ಲಿ ಟ್ರ್ಯಾಕ್ಟರ್ ಮೇಲೆ 7 ಲಕ್ಷ ರೂ ಸಾಲ ಮತ್ತು ತಾಯಿ ಹೆಸರಿನಲ್ಲಿ ಸಂಘ, ಹಾಗೂ ಕೈ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಮಾಡಿಕೊಂಡ ಸಾಲ ಹೇಗೆ ತೀರಿಸುವುದು ಎಂದು ಚಿಂತಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮೃತನ ತಂದೆ ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News