ತಾಜ್‌ಮಹಲ್‌ಗೆ ಅಪಾಯ ಇಲ್ಲ: ಮಹೇಶ್ ಶರ್ಮಾ

Update: 2018-07-13 17:56 GMT

ಹೊಸದಿಲ್ಲಿ, ಜು. 13: ತಾಜ್‌ಮಹಲ್‌ಗೆ ಯಾವುದೇ ಅಪಾಯ ಇಲ್ಲ ಎಂದು ಕೇಂದ್ರದ ಸಹಾಯಕ ಸಚಿವ ಮಹೇಶ್ ಶರ್ಮಾ ಗುರುವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯದ ಕುರಿತು ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿದಾವಿತ್ ಸಲ್ಲಿಸಲಿದ್ದೇವೆ ಎಂದರು.

‘‘ತಾಜ್‌ಮಹಲ್‌ಗೆ ಯಾವುದೇ ಅಪಾಯ ಇಲ್ಲ ಎಂದು ಭರವಸೆ ನೀಡಲು ನಾನು ಬಯಸುತ್ತೇನೆ. ತಾಜ್‌ಮಹಲ್‌ನ ಮೂಲ ಬಣ್ಣದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ನಾವು ಸುಪ್ರೀಂ ಕೋರ್ಟ್‌ಗೆ ಅಫಿದಾವಿತ್ ಸಲ್ಲಿಸಲಿದ್ದೇವೆ’’ ಎಂದು ಅವರು ಹೇಳಿದ್ದಾರೆ.

ತಾಜ್‌ಮಹಲ್ ರಕ್ಷಣೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರ ಹಾಗೂ ಉತ್ತರಪ್ರದೇಶ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಒಂದು ದಿನದ ಬಳಿಕ ಶರ್ಮಾ ಅವರ ಈ ಹೇಳಿಕೆ ಹೊರಬಿದ್ದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News