ಬೆಳಗಾವಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಇಬ್ಬರು ಮೃತ್ಯು

Update: 2018-07-14 05:34 GMT

ಬೆಳಗಾವಿ, ಜು. 14: ಬೆಳಗಾವಿಯಿಂದ ಉಡುಪಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡ ಘಟನೆ ಬೆಳಗಾವಿಯ ಹಿರೇಬಾಗೇವಾಡಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಕಿತ್ತೂರು ತಾಲೂಕಿನ ಅಶೋಕ ದುಂಡಿ ಎಂದು ಗುರುತಿಸಲಾಗಿದ್ದು, ಮತ್ತೋರ್ವರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಡುರಸ್ತೆಯಲ್ಲಿ ಬಸ್​ ಪಲ್ಟಿಯಾದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಹಿರೆಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News