ತೊಕ್ಕೊಟ್ಟು: ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು
Update: 2018-07-14 19:23 IST
ಉಳ್ಳಾಲ, ಜು. 14: ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಉಳ್ಳಾಲ ಕಡೆಗೆ ಹೋಗುತಿದ್ದ ನಗರ ಸಾರಿಗೆ ಬಸ್ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.