ಶೃಂಗೇರಿ: ಪಿಕಪ್ ವಾಹನ ಅಪಘಾತ; ಕೇರಳ ಮೂಲದ ಇಬ್ಬರು ಮೃತ್ಯು

Update: 2018-07-14 16:13 GMT

ಶೃಂಗೇರಿ, ಜು.14: ಶೃಂಗೇರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಶೃಂಗೇರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಕೇರಳ ಮೂಲದ ಕಾರ್ಮಿಕರಿದ್ದ ಪಿಕಪ್ ವಾಹನದ ಆಕ್ಸೆಲ್ ಬ್ಲೇಡ್ ಕಟ್ ಆಗಿ ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಕೇರಳ ಮೂಲದ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ

ಮೃತರನ್ನು ಶಂಕರ್ (38), ವೇಣು (46) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಈ ಕಾರ್ಮಿಕರು ಆಗುಂಬೆಯಲ್ಲಿ ಬಾವಿ ಕೆಲಸ ಮುಗಿಸಿ ಪಿಕಪ್ ವಾಹನದಲ್ಲಿ ಹಿಂದಿರುಗವಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬಸ್ ಅಪಘಾತ; ಹಲವರಿಗೆ ಗಾಯ

ತಾಲೂಕು ವ್ಯಾಪ್ತಿಯ ಬಿದರಗೋಡು ಎಂಬಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ತೀರ್ಥಹಳ್ಳಿಯಿಂದ ಬಾಳೆಹೊನ್ನೂರಿಗೆ ಬರುತ್ತಿದ್ದ ಸಹಕಾರಿ ಸಾರಿಗೆ ಎಂಬ ಖಾಸಗಿ ಸಾರಿಗೆ ಬಸ್ ರಸ್ತೆ ಪಕ್ಕದ ಹೊಂಡಕ್ಕೆ ಸಿಲುಕಿ ಅರ್ಧ ವಾಲಿ ನಿಂತ ಘಟನೆ ವರದಿಯಾಗಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ ಸುಮಾರು 40 ಪ್ರಯಾಣಿಕರ ಪೈಕಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಬಸ್ ಚಾಲಕನ ಮುಂಜಾಗ್ರತಾ ಕ್ರಮದಿಂದ ಸಂಭವಿಸಲಿದ್ದ ಭಾರೀ ಅಪಘಾತ ತಪ್ಪಿದೆ ಎನ್ನಲಾಗಿದೆ. ಈ ಅಪಘಾತ ಘಟನೆಗಳ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News