ಮಂಡ್ಯ: ಎರಡು ಗುಂಪುಗಳ ನಡುವೆ ಘರ್ಷಣೆ; ಮೂವರು ಗಂಭೀರ

Update: 2018-07-14 18:34 GMT

ಮಂಡ್ಯ, ಜು.14: ಹಾಡಹಗಲೇ ಶ್ರೀರಂಗಪಟ್ಟಣದಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

ಘಟನೆಯಲ್ಲಿ ಭರತ್, ಚಂದ್ರ ಹಾಗೂ ಸತ್ಯನಾರಾಯಣ್ ಎಂಬ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವನನ್ನು ಪಟ್ಟಣದ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ ಇದ್ದಕ್ಕಿದ್ದಂತೆ ಮಚ್ಚು, ಲಾಂಗ್ ಹಿಡಿದ ಯುವಕರು ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಆದರೆ, ಈ ಬಡಿದಾಟಕ್ಕೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರ ನಡುವೆ ಘರ್ಷಣೆ ನಡೆಯಲಿದೆ ಎಂದು ಮಾಹಿತಿ ಇದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಹಾಗೂ ಯುವಕರ ಪೋಷಕರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News