ಕಡೂರು: ಹೆಜ್ಜೇನು ದಾಳಿಗೆ ವೃದ್ಧೆ ಬಲಿ
Update: 2018-07-15 18:32 GMT
ಕಡೂರು, ಜು.15: ಹೆಜ್ಜೇನು ದಾಳಿಯಿಂದ ವೃದ್ಧೆಯೋರ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ತಾಲೂಕಿನ ದೊಡ್ಡಪ್ಪನಹಳ್ಳಿ ಗ್ರಾಮದ ವೃದ್ಧೇ ಮರುಳಮ್ಮ(85) ಎಂಬವರು ಜು.12ರ ಗುರುವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ಕಚ್ಚಿದ್ದು. ತಕ್ಷಣವೇ ಅವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರ ಬೆಳಗ್ಗೆ ಅಸುನೀಗಿದ್ದಾರೆಂದು ತಿಳಿದು ಬಂದಿದೆ.