ಕೋಡಿ ಬ್ಯಾರೀಸ್‌ನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Update: 2018-07-16 08:27 GMT

ಕುಂದಾಪುರ, ಜು.16: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತೃತೀಯ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಸ್ವಾಗತ ಕಾರ್ಯಕ್ರಮ ನಡೆಟಯಿತು.

 ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಂಸ್ಥೆಯ ಕಚೇರಿ ಅಧೀಕ್ಷಕ ಭಾಸ್ಕರ್ ಶೆಟ್ಟಿ, ಜಗತ್ತಿನಲ್ಲಿ ಎಲ್ಲಕ್ಕಿಂತ ಶ್ರೇಷ್ಠವಾದುದ್ದು ವಿದ್ಯಾಲಯ. ವಿದ್ಯೆ ಕಲಿತವನಿಗೆ ಸರಿ-ತಪ್ಪುಗಳ ಬಗ್ಗೆ ಅರಿವು ಇರುತ್ತದೆ. ಆ ನಿಟ್ಟಿನಲ್ಲಿ ನಮ್ಮ ವರ್ತನೆ ಇರಲಿ ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ಡಾ.ಶಮೀರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಮಾಲತಿ ಮಾತನಾಡಿದರು. ಇದೇ ಸಂದರ್ಭ ಸ್ಪರ್ಧೆಗಳನ್ನು ನಡೆಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

ವಿದ್ಯಾರ್ಥಿಗಳಾದ ಸಫಾನ್ ವಂದಿಸಿದರು. ಶಲಿಕತ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸಂಪ್ರೀತಾ ಹಾಗೂ ಸುಹಾನ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News