ಕೇಂದ್ರಿಯ ವಿದ್ಯಾಲಯದ ಶಿಕ್ಷಕ ಆತ್ಮಹತ್ಯೆಗೆ ಶರಣು

Update: 2018-07-16 14:38 GMT

ಶಿವಮೊಗ್ಗ, ಜು. 16: ನಗರದ ಹೊರವಲಯ ಊರುಗಡೂರು ಗ್ರಾಮದಲ್ಲಿರುವ ಕೇಂದ್ರಿಯ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರೋರ್ವರು, ವಿದ್ಯಾಲಯ ಆವರಣದಲ್ಲಿರುವ ನೌಕರರ ಕ್ವಾಟರ್ಸ್‍ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ಗೋವಿಂದ್ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ ಎಂದು ಗುರುತಿಸಲಾಗಿದೆ. ಇವರು ಮೂಲತಃ ಗುಜರಾತ್ ರಾಜ್ಯದವರಾಗಿದ್ದು, ಇಲ್ಲಿನ ಕೇಂದ್ರಿಯ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೋವಿಂದ್‍ರವರು ಬರೆದಿಟ್ಟ ಡೆತ್‍ನೋಟ್ ಮೂಲಕ ತಿಳಿದುಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News