ಚಾಮರಾಜನಗರ: ಬಾಳೆ ಗಿಡಗಳ ಮಧ್ಯೆ ಬೆಳೆದಿದ್ದ ಗಾಂಜಾ ವಶ

Update: 2018-07-16 16:29 GMT

ಚಾಮರಾಜನಗರ,ಜು.16: ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಮೀನಿನ ಬಾಳೆ ಗಿಡಗಳ ಮದ್ಯೆ ಅಕ್ರಮವಾಗಿ ಬೆಳೆಸಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿ ಬಳಿಯ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಸಣ್ಣೇಗೌಡರ ಮಗ ಉಮೇಶ್ (42) ರವರ ಜಮೀನಿನಲ್ಲಿರುವ ಬಾಳೆ ಗಿಡಗಳ ನಡುವೆ ಅಕ್ರಮವಾಗಿ ಬೆಳಸಲಾಗಿದ್ದ 20 ಕೆ.ಜಿ ಗಾಂಜಾ ಗಿಡಗಳನ್ನು ಕೊಳ್ಳೇಗಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪಾಧೀಕ್ಷ ಪುಟ್ಟಮಾದಯ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ವನರಾಜು ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಗಿಡಗಳ ಸಮೇತ ಆರೋಪಿಯನ್ನು ಬಂಧಿಸಲಾಯಿತು. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News