ಶಿರೂರು ಸ್ವಾಮೀಜಿ ಸಾವಿನ ತನಿಖೆಗೆ ಆಗ್ರಹ

Update: 2018-07-19 05:21 GMT

ಉಡುಪಿ, ಜು.19: ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಹಿನ್ನೆಲೆಯಲ್ಲಿ ಅವರ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್ ಉಡುಪಿ ಒತ್ತಾಯಿಸಿದ್ದಾರೆ.

ಸ್ವಾಮೀಜಿ ಸೇವಿಸಿದ ಆಹಾರದಲ್ಲಿನ ವ್ಯತ್ಯಾಸದಿಂದ ಅವರು ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ. ಅವರ ಸಾವಿನ ಹಿಂದೆ ಎಷ್ಟೇ ದೊಡ್ಡ ರಹಸ್ಯವಿದ್ದರೂ ಅದನ್ನು ಬಯಲಿಗೆಳೆಯಬೇಕು ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News