ಶಿರೂರು ಸ್ವಾಮೀಜಿ ನಿಧನಕ್ಕೆ ಗಣ್ಯರ ಸಂತಾಪ

Update: 2018-07-19 06:40 GMT

ಉಡುಪಿ, ಜು.19: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಶಿರೂರು ಶ್ರೀ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಅವರ ಅಗಲಿಕೆಯಿಂದ ಇಡಿ ಭಕ್ತ ಸಮೂಹಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವಲ್ಲಿ ಸ್ವಾಮೀಜಿ ಮಾರ್ಗದರ್ಶಕರಾಗಿದ್ದರು ಎಂದವರು ಶೋಕ ವ್ಯಕ್ತಪಡಿಸಿದ್ದಾರೆ.

*ಜಯಮಾಲಾ: ಶಿರೂರು ಸ್ವಾಮೀಜಿಯ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಜಯಮಾಲಾ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಹಿತ್ಯ ಮತ್ತು ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಶಿರೂರು ಸ್ವಾಮೀಜಿ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸನ್ಯಾಸವನ್ನು ಸ್ವೀಕರಿಸಿ, ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಜವಾಬ್ದಾರಿ ವಹಿಸಿದ್ದರು. ಇವರ ಆಕಾಲಿಕ ಮರಣ ಇಡೀ ಸಮಾಜಕ್ಕೆ ತುಂಬಾಲಾಗದ ನಷ್ಟ, ಈ ಆಘಾತವನ್ನು ಭರಿಸುವ ಶಕ್ತಿಯನ್ನು ಸಮಾಜಕ್ಕೆ ಹಾಗೂ ಇಡಿ ಭಕ್ತ ಸಮೂಹಕ್ಕೆ ಅ ಭಗವಂತ ನೀಡಲಿ ಎಂದು ಪ್ರಾಥಿಸುತ್ತೇನೆ ಎಂದು ಹೇಳಿದ್ದಾರೆ.

* ಸದ್ಭಾವನಾ ವೇದಿಕೆ: ಶಿರೂರು ಸ್ವಾಮೀಜಿಯ ನಿಧನಕ್ಕೆ ಸದ್ಭಾವನಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News