ಶಿರೂರು ಸ್ವಾಮೀಜಿ ಸಂಶಯಾಸ್ಪದ ಸಾವು: ಪ್ರಕರಣ ದಾಖಲು

Update: 2018-07-19 08:30 GMT

ಉಡುಪಿ, ಜು.19: ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಸಾವು ಸಂಶಯಾಸ್ಪದವಾಗಿರುವುದಾಗಿ ಅವರ ಕುಟುಂಬಸ್ಥರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಾಮೀಜಿಯ ಸಹೋದರ ಲತಾವ್ಯ ಆಚಾರ್ಯ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಶೀರೂರು ಸ್ವಾಮೀಜಿ ವಿಷ ಸೇವನೆಯಿಂದ ಮೃತಪಟ್ಟಿದ್ದು, ಈ ಬಗ್ಗೆ ಸಂಶಯವಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ದೂರಿನ ವಿಚಾರವನ್ನು ಹಿರಿಯಡ್ಕ ಎಸ್ಸೈ ದೃಢಪಡಿಸಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News