ರಸ್ತೆಯಿಂದ ಜಾರಿ ಕಂದಕಕ್ಕೆ ಬಿದ್ದ ಬಸ್: 14 ಮಂದಿ ಮೃತ್ಯು

Update: 2018-07-19 09:05 GMT

ಹೊಸದಿಲ್ಲಿ, ಜು.19: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಸೂರ್ಯಧಾರ್ ಸಮೀಪದ ರಿಷಿಕೇಶ್-ಗಂಗೋತ್ರಿ ಹೆದ್ದಾರಿಯಲ್ಲಿ ಸ್ಕಿಡ್ ಆದ ಬಸ್ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಹೆಲಿಕಾಪ್ಟರ್ ಗಳನ್ನು ಬಳಸಲಾಯಿತು.  ರಕ್ಷಣಾ ಕಾರ್ಯಕ್ಕಾಗಿ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News