ಶಿರೂರು ಶ್ರೀಗಳ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸಭಾ ಸಂತಾಪ

Update: 2018-07-19 11:03 GMT

ಉಡುಪಿ,ಜು.19: ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಸ್ವಾಮೀಜಿಗಳಾಗಿದ್ದ ಲಕ್ಷ್ಮೀಶ್ವರ ತೀರ್ಥ ಸ್ವಾಮಿ ಶ್ರೀಗಳ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸಭಾ ಸಂಘಟನೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸಂಗೀತ, ಸಾಹಿತ್ಯದಲ್ಲಿ ವಿಶೇಷ ಅಭಿಮಾನವನ್ನು ಹೊಂದಿದ್ದ ಶಿರೂರು ಶ್ರೀಗಳು ಸದಾ ಬಡವರ ಪರ ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದರು. ಉಡುಪಿಯಲ್ಲಿ ಹುಲಿವೇಷದಂತಹ ಕಲೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದ ಸ್ವಾಮೀಜಿಗಳು ಸರ್ವ ಧರ್ಮ ಸಮನ್ವಯತೆ ಸಾರುವಲ್ಲಿ ಮಂಚೂಣಿಯಲ್ಲಿದ್ದರು. ಅವರು ಸದಾ ಎಲ್ಲಾ ಧರ್ಮದವರನ್ನು ಪ್ರೀತಿಯಿಂದ ಕಾಣುತ್ತಿದ್ದು ಅವರ ಅನೀರಿಕ್ಷೀತ ಸಾವು ನಿಜಕ್ಕೂ ಬೇಸರವನ್ನು ಉಂಟು ಮಾಡಿದೆ.  ಅಗಲಿದ ಶ್ರೀಗಳಿಗೆ ಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಕರುಣಿಸಲಿ ಎಂದು ಕೆಥೊಲಿಕ್ ಸಭಾ ಉಡುಪಿ ಧರ್ಮಪ್ರಾಂತ್ಯ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News