ಅವಿಶ್ವಾಸ ಗೊತ್ತುವಳಿ ವಿರುದ್ಧ ಮತ: ಶತ್ರುಘ್ನ ಸಿನ್ಹಾ

Update: 2018-07-19 17:38 GMT

ಹೊಸದಿಲ್ಲಿ, ಜು.19: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿದ್ದ ಬಿಜೆಪಿ ಸಂಸದ ಶತ್ರುಘ್ನ ಸಿನ್ಹ, ಪಕ್ಷದೊಂದಿಗಿನ ಭಿನ್ನಾಭಿಪ್ರಾಯವನ್ನು ಬದಿಗಿರಿಸಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ವಿರುದ್ಧ ಮತ ಚಲಾಯಿಸಲಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ಮುನ್ನ ಬಿಜೆಪಿ ತ್ಯಜಿಸುವ ಯಾವುದೇ ಉದ್ದೇಶ ತನಗಿಲ್ಲ ಎಂದು ಪಾಟ್ನ ಸಾಹಿಬ್‌ನ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಹಾಗೂ ಅವರ ಕುಟುಂಬದೊಂದಿಗೆ ಆತ್ಮೀಯತೆ ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News