ಶಿರೂರುಶ್ರೀಗಳ ನಿಧನಕ್ಕೆ ಗಣ್ಯರ ಸಂತಾಪ
Update: 2018-07-19 17:42 GMT
ಉಡುಪಿ, ಜು.19: ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅ.ವಂ. ಡಾ.ಜೆರಾಲ್ಡ್ ಲೋಬೊ, ಉಡುಪಿ ಧರ್ಮಪ್ರಾಂತದ ಕೆಥೋಲಿಕ್ ಸಭಾ, ಇಂಟಕ್ ಘಟಕದ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಲಿತ ಮುಖಂಡ ಜಯನ್ ಮಲ್ಪೆ ಸಂತಾಪ ವ್ಯಕ್ತಪಡಿಸಿದ್ದಾರೆ.