ಶಿರಾ: ರಸ್ತೆ ಅಪಘಾತದಲ್ಲಿ ದಂಪತಿ ಸಹಿತ ಮೂವರು ಸ್ಥಳದಲ್ಲೇ ಮೃತ್ಯು

Update: 2018-07-20 05:13 GMT

ತುಮಕೂರು, ಜು.20: ಲಾರಿ ಮತ್ತು ಕ್ಯಾಂಟರ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಹಿತ ಮೂವರು ಮೃತಪಟ್ಟ ಘಟನೆ ಶಿರಾದ ದೊಡ್ಡ ಆಲದಮರದ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ರಾಣಿ ಬೆನ್ನೂರಿನ ಕರೂರು ಗ್ರಾಮ ನಿವಾಸಿಗಳಾದ ಹನುಮಂತರಾಜು(40), ಅವರ ಪತ್ನಿ ರಾಧಾ(35) ಹಾಗೂ ಕ್ಯಾಂಟರ್ ಚಾಲಕ ಕೆ.ಆರ್.ನಗರ ನಿವಾಸಿ ಲೋಕೇಶ್(34) ಎಂದು ಗುರುತಿಸಲಾಗಿದೆ.

ಶಿರಾದ ದೊಡ್ಡ ಆಲದ ಮರದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ನಜ್ಜುಗುಜ್ಜಾಗಿದ್ದ ವಾಹನದಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಅಪಘಾತದ ಹಿನ್ನೆಲೆಯಲ್ಲಿ ಸುಮಾರು 2 ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದ ಬಗ್ಗೆ ಕಳ್ಳಂಬೆಂಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News