ಬೆಳ್ತಂಗಡಿ: ರಸ್ತೆಗೆ ಮರಬಿದ್ದು ವಾಹನ ಸಂಚಾರ ಸ್ಥಗಿತ

Update: 2018-07-20 07:06 GMT

ಬೆಳ್ತಂಗಡಿ, ಜು.20: ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಬೆಳ್ತಂಗಡಿ ಪೇಟೆಯಲ್ಲಿ ಇಂದು ಬೆಳಗ್ಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇಲ್ಲಿನ ವಾಣಿ ಕಾಲೇಜಿನ ಸಮೀಪ ಈ ಘಟನೆ ನಡೆದಿದೆ. ಇದರಿಂ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಪೊಲೀಸರು ಮರವನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News