ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-07-20 16:53 GMT

ಬೆಂಗಳೂರು, ಜು.20: ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು 2018ನೆ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರ ಪುನರ್ವಸತಿಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ವ್ಯಕ್ತಿಗಳು/ಸಂಸ್ಥೆಗಳಿಗೆ ರಾಷ್ಟ್ರಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿರುತ್ತಾರೆ.

ಈ ಪ್ರಶಸ್ತಿಗೆ ಅರ್ಹರಿರುವ ಕಲಚೇತನ ವ್ಯಕ್ತಿಗಳು ಹಾಗೂ ವಿಕಲಚೇತನರಿಗಾಗಿ ಶ್ರಮಿಸುತತಿರುವ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಶಿಫಾರಸ್ಸಿನೊಂದಿಗೆ ಆಂಗ್ಲಭಾಷೆಯಲ್ಲಿ ಅರ್ಜಿಯನ್ನು ಪೂರಕ ದಾಖಲೆಗಳೊಡನೆ ಸಲ್ಲಿಸಲು ಆ.6 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ವೆಬ್‌ಸೈಟ್ ವಿಳಾಸ www.disabilityaffairs.gov.in ಅನ್ನು ಪರಿಶೀಲಿಸಲು ಮತ್ತು ಆಯಾ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅಥವಾ ನಿರ್ದೇಶಕರು, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇವರನ್ನು ಖುದ್ದಾಗಿ ಅಥವಾ ದೂ.080-22866066, 22866046, 22860907 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News