ಚಿಕ್ಕಮಗಳೂರು: ತಾಪಂ ಉಪಾಧ್ಯಕ್ಷರಾಗಿ ರಮೇಶ್ ಆಯ್ಕೆ
Update: 2018-07-20 18:00 GMT
ಚಿಕ್ಕಮಗಳೂರು, ಜು.20: ಇಲ್ಲಿನ ತಾಪಂ ನೂತನ ಉಪಾಧ್ಯಕ್ಷರಾಗಿ ಹಿರೇಕೊಳಲೆ ಕ್ಷೇತ್ರದ ತಾಪಂ ಸದಸ್ಯ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಉಪಾಧ್ಯಕರ ಆಯ್ಕೆ ಚುನಾವಣೆಯಲ್ಲಿ ರಮೇಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರಮೇಶ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಶಾಸಕ ಸಿ.ಟಿ. ರವಿ, ಜಿಪಂ ಶಿಕ್ಷಣ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್ ಕುಮಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ,ಅಧ್ಯಕ್ಷ ಜಯಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವ್ಯಾ ನಟೇಶ್, ಎಪಿಎಂಸಿ ಅಧ್ಯಕ್ಷ ಬಸವರಾಜ್ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದರು.