ಗ್ರೂಪ್ ‘ಡಿ’ ನೌಕರರಿಗೆ ಸನ್ಮಾನ ಸಮಾರಂಭ

Update: 2018-07-20 18:17 GMT

ಮಂಗಳೂರು, ಜ.20: ದ.ಕ. ಜಿಲ್ಲಾ ಗ್ರೂಪ್ ‘ಡಿ’ ನೌಕರರ ಸಂಘದ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಅಧ್ಯಕ್ಷತೆಯಲ್ಲಿ ಸರಕಾರಿ ನೌಕರರ ಸಭಾಭವನದಲ್ಲಿ ಜರುಗಿತು.

ಇಲಾಖಾವಾರು 2018-19ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಪದೋನ್ನತಿ ಹೊಂದಿದ ನೌಕರರ ಸಂಚಾಲಕರಾಗಿ ಜಗದೀಶ್(ಆರೋಗ್ಯ ಇಲಾಖೆ) ನಿವೃತ್ತ ಹೊಂದಿದ ನೌಕರರ ಸಂಚಾಲಕರಾಗಿ ಚಂದ್ರಹಾಸ ಶೆಟ್ಟಿ (ಪಿಡಬ್ಲ್ಯೂಡಿ ಇಲಾಖೆ) ಇವರನ್ನು ಆಯ್ಕೆ ಮಾಡಲಾಯಿತು.

ಬಳಿಕ ನಡೆದ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಸಂಘದ ವತಿಯಿಂದ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಹಾನಗರಪಾಲಿಕೆ ಸದಸ್ಯರಾದ ರಾಧಾಕೃಷ್ಣ , ಪ್ರೇಮಾನಂದ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್, ಸತೀಶ್ ಕುದ್ರೋಳಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 21 ಮಂದಿ ನಿವೃತ್ತ ಗ್ರೂಪ್ ‘ಡಿ’ ನೌಕರರನ್ನು ಸನ್ಮಾನಿಸಲಾಯಿತು. ವಾರ್ಷಿಕ ಆಡಳಿತ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ ಹಾಗೂ ಕೋಶಾಧಿಕಾರಿ ಲೆಕ್ಕಪತ್ರ ಮಂಡಿಸಿದರು.

ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಿದ ಸಂಘದ ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News