ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿಯಾಗಿ ಪಾದಚಾರಿ ಮೃತ್ಯು

Update: 2018-07-21 04:08 GMT

ಪಡುಬಿದ್ರೆ, ಜು.21: ಯಾವುದೋ ವಾಹನ ಢಿಕ್ಕಿಯಾಗಿ ಪರಾರಿಯಾದ ಕಾರಣ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಡೊಮಿನಿನ್ ಪ್ಲಾಝಾ ಬಳಿ ಇಂದು ಬೆಳಗ್ಗೆ ನಡೆದಿದೆ.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿದಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಂದಾಜು 60 ವರ್ಷ ಪ್ರಾಯದ ವ್ಯಕ್ತಿಗೆ ಯಾವುದೊ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿಯಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಪಡುಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News