ಬೆಂಗಳೂರು: ಜೂಜಾಡುತ್ತಿದ್ದ 11 ಜನರ ಬಂಧನ

Update: 2018-07-21 16:17 GMT

ಬೆಂಗಳೂರು, ಜು.21: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದ ಮೇಲೆ 11 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ, 67 ಸಾವಿರ ರೂ.ನಗದು ವಶಕ್ಕೆ ಪಡೆದಿದ್ದಾರೆ.

ನಗರದ ನಿವಾಸಿಗಳಾದ ರಾಜು(32), ಗುರುಪ್ರಸಾದ್(30), ರಾಮಯ್ಯ(26) ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ತಿಳಿಸಿದೆ.

ನಗರದ ಗಿಡ್ಡದ ಕೋನೇನಹಳ್ಳಿಯ ಮುನೇಶ್ವರ ಬ್ಲಾಕ್‌ನ 3ನೇ ಕ್ರಾಸ್‌ನಲ್ಲಿ ಕೆಲವರು ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News