ಮಂಗಳೂರು : ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

Update: 2018-07-21 17:13 GMT

ಮಂಗಳೂರು, ಜು.21: ಕೊಲೆ, ಕೊಲೆಯತ್ನ, ಹಲ್ಲೆ, ಕಳ್ಳತನ, ದರೋಡೆ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಶನಿವಾರ ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ನಿವಾಸಿ ಹನೀಫ್ ಯಾನೆ ಮುಹಮ್ಮದ್ ಹನೀಫ್(30) ಬಂಧಿತ ಆರೋಪಿ.

ಬಂಧಿತ ಆರೋಪಿ ಹನೀಫ್ ವಿರುದ್ಧ ಉಳ್ಳಾಲ, ಮಂಗಳೂರು ಉತ್ತರ, ಕುಶಾಲನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ ಎಸಿಪಿ ಕೆ.ರಾಮರಾವ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್.ಗೋಪಿಕೃಷ್ಣ, ಪೊಲೀಸ್ ಉಪ-ನಿರೀಕ್ಷಕ ಗುರಪ್ಪಕಾಂತಿ, ವಿನಾಯಕ ತೋರಗಲ್, ಮತ್ತು ರಂಜಿತ್, ದಿನೇಶ ಶೆಟ್ಟಿ, ಪ್ರಶಾಂತ, ವಾಸುದೇವ, ಚಿದಾನಂದ, ಸುರೇಶ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News