ವಿಕಲಚೇತನರ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2018-07-21 17:40 GMT

ಉಡುಪಿ, ಜು.21:ಭಾರತ ಸರಕಾರವು 2018ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನಿೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574810/811) ಈ ಕಚೇರಿಯಿಂದ ಅಥವಾ www.disabilityaffairs.gov.in ವೆಬ್‌ಸೈಟ್‌ನಿಂದ ಅರ್ಜಿಗಳನ್ನು ಪಡೆದು, ಆಂಗ್ಲ ಭಾಷೆಯಲ್ಲಿ ವಿವರಗಳೊಂದಿಗೆ ಭರ್ತಿ ಮಾಡಿ ಆ.2ರೊಳಗೆ ಕಚೇರಿಗೆ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಬಾಗ), ಅರ್ಜಿದಾರರ/ವ್ಯಕ್ತಿಗಳ/ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ, ಪೂರಕ ದಾಖಲೆಗಳೊಂದಿಗೆ, ಡ್ರಾಪ್ಟ್ ಸೈಟೇಷನ್ ಈ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಅರ್ಜಿಯನ್ನು ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News