ಸಿದ್ಧಲಿಂಗ ಪಟ್ಟಣಶೆಟ್ಟಿಗೆ ದೊಡ್ಡನಗೌಡ ರಂಗಪುರಸ್ಕಾರ ಪ್ರದಾನ

Update: 2018-07-21 17:57 GMT

ಬೆಂಗಳೂರು, ಜು.21: ರಂಗತೋರಣ ವತಿಯಿಂದ ನೀಡುವ ಜೋಳದರಾಶಿ ದೊಡ್ಡನಗೌಡ ರಂಗಪುರಸ್ಕಾರವನ್ನು ಹಿರಿಯ ನಾಟಕಕಾರ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಪ್ಪಗಲ್ಲು ಪ್ರಭುದೇವ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ರಂಗಭೂಮಿಯಲ್ಲಿ ವಿಶೇಷವಾದ ಸಾಧನೆ ಮಾಡಿದ ರಂಗಕರ್ಮಿಗಳಿಗೆ ದೊಡ್ಡನಗೌಡ ರಂಗಪುರಸ್ಕಾರ ನೀಡಲಾಗುತ್ತಿದ್ದು, ಅದು 21 ಸಾವಿರ ರೂ.ಗಳು ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ತಿಳಿಸಿದರು.

ಜು.29 ರಂದು ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ತಿಪ್ಪಣ್ಣ, ಪ್ರಾಧ್ಯಾಪಕ ಮೃತ್ಯುಂಜಯ ರುಮಾಲೆ, ರಮೇಶ ಟ್ರಸ್ಟ್‌ನ ಅಧ್ಯಕ್ಷ ಕೆ.ಪೊಂಪನಗೌಡ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News