ಜೆಪ್ಪಿನಮೊಗರು: ರಸ್ತೆ ಗುಂಡಿಗೆ ದ್ವಿಚಕ್ರ ವಾಹನದ ಹಿಂಬದಿ ಸವಾರ ಬಲಿ

Update: 2018-07-22 09:52 GMT

ಮಂಗಳೂರು, ಜು.22: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆ ಸಮೀಪದ ಜೆಪ್ಪಿನಮೊಗರುವಿನಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ತೊಕ್ಕೊಟ್ಟುವಿನಿಂದ ಮಂಗಳೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನದ ಸವಾರ ಹೆದ್ದಾರಿಯ ಗುಂಡಿಯನ್ನು ತಪ್ಪಿಸಿದಾಗ ಹಿಂಬದಿ ಕುಳಿತಿದ್ದ ವ್ಯಕ್ತಿ ರಸ್ತೆಗೆಸೆಯಲ್ಪಟ್ಟರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ವಾಹನವೊಂದು ವ್ಯಕ್ತಿಯ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News