ಬೆಳ್ಳಾರೆ: ಗೃಹರಕ್ಷಕ ದಳದಿಂದ ವನಮಹೋತ್ಸವ

Update: 2018-07-22 12:16 GMT

ಮಂಗಳೂರು, ಜು.22: ಜಿಲ್ಲಾ ಗೃಹರಕ್ಷಕ ದಳದಿಂದ ಸುಳ್ಯ ತಾಲೂಕಿನ ಬೆಳ್ಳಾರೆ ಘಟಕದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ರವಿವಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಗಿಡ ನೆಡುವುದು, ಕಾಡು ಸಂರಕ್ಷಿಸು ವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬ ಗೃಹರಕ್ಷಕರು ಒಂದೊಂದು ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ವನಮಹೋತ್ಸವವನ್ನು ಸಾರ್ಥಕಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗೃಹರಕ್ಷಕರಿಗೆ ಸಸಿಯನ್ನು ವಿತರಿಸಲಾಯಿತು. ಬೆಳ್ಳಾರೆ ಘಟಕದ ಘಟಕಾಧಿಕಾರಿ ನಾರಾಯಣ ಹಾಗೂ ಸಾರ್ಜೆಂಟ್‌ರಾದ ವಸಂತ ಕುಮಾರ್ ಹಾಗೂ ಬೆಳ್ಳಾರೆ ಘಟಕದ ಗೃಹರಕ್ಷಕ ಹಾಗೂ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News