ಬೆಂಗಳೂರು: ಯುವಕನಿಗೆ ಚೂರಿ ಇರಿತ

Update: 2018-07-22 13:02 GMT

ಬೆಂಗಳೂರು, ಜು.22: ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದು, ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಇಲ್ಲಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರವಿವಾರ ಕಾಡುಗೋಂಡನಹಳ್ಳಿಯ ಮಸೀದಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಹೇಲ್(26) ಎಂಬಾತನ ಮೇಲೆ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಸುಹೇಲ್‌ನನ್ನು ಯಲಹಂಕದ ಡಾ.ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸಂಬಂಧ ಕೆಜಿ ಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News